ಕುತ್ಲೂರು: ಅತ್ರಿಜಾಲು ಸಂಪರ್ಕ ರಸ್ತೆ ಕುಸಿತ- ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಭೇಟಿ ಪರಿಶೀಲನೆ

0

ಕುತ್ಲೂರು: ಜು.31ರಂದು ರಾತ್ರಿ ಸುರಿದ ಭಾರೀ ಮಳೆಗೆ ಕುಸಿದ ಕುತ್ಲೂರು ಅತ್ರಿಜಾಲು ಸಂಪರ್ಕ ರಸ್ತೆಯನ್ನು ಆ.01ರಂದು ಮಾನ್ಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಭೇಟಿ ನೀಡಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್, ನಿಕಟಪೂರ್ವ ಉಪಾಧ್ಯಕ್ಷ ಉದಯ್ ಹೆಗ್ಡೆ, ಗ್ರಾಮ ಪಂಚಾಯತ್ ಸದಸ್ಯರಾದ ಸುದರ್ಶನ್ ಹೆಗ್ಡೆ, ಮಂಡಲ ಉಪಾಧ್ಯಕ್ಷ ಮೋಹನ್ ಅಂಡಿಂಜೆ, ನಾರಾವಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ನಾರಾವಿ ಮತ್ತು ಅಂಡಿಂಜೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here