ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿ ಕಷಾಯ ವಿತರಣೆ

0

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ಆ.04ರಂದು ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಟಿದ ಕಷಾಯ ವಿತರಣಾ ಕಾರ್ಯಕ್ರಮ ಬೆಳ್ತಂಗಡಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆಯಿತು.

ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಮತ್ತು ರಿಕ್ಷಾ ಚಾಲಕರು ಮತ್ತು ಹಲವಾರು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು ಮತ್ತು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ಗೌರವ ಸಲಹೆಗಾರ ಪ್ರೇಮ್ ರಾಜ್ ರೋಶನ್, ಕ್ರೀಡಾ ಕಾರ್ಯದರ್ಶಿ ಕಿಶನ್ ಲಾಯಿಲ, ಪ್ರಧಾನ ಕಾರ್ಯದರ್ಶಿ ಗಣೇಶ್, ಸಾಮಾಜಿಕ ಜಾಲತಾಣದ ಸಂಪತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here