ಪೆರಿ೦ಜೆ: ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ

0

ಪೆರಿ೦ಜೆ: ಶ್ರೀ ಧ.ಮ. ಅನುದಾನಿತ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಇಲ್ಲಿನ ಆಡಳಿತ ಮುಕ್ತೇಸರ ಜೀವಂದರ್ ಕುಮಾರ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಧನ್ಯ ಕುಮಾರ್ ಜೈನ್ ರವರು ಸ್ಪರ್ಧಾಳುಗಳಿಗೆ ಚದುರಂಗದಾಟದ ಮಹತ್ವವನ್ನು ತಿಳಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭರಾರೈಸಿದರು.

ಅತಿಥಿಗಳಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಜಯ, ದೈಹಿಕ ಶಿಕ್ಷಕರ ಗ್ರೇಡ್ -2 ಇದರ ಅಧ್ಯಕ್ಷ ಅಖಿಲ್ ಕುಮಾರ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯ ಮುಕುಂದಚಂದ್ರರವರು ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕಿನ ವಿವಿಧ ಶಾಲೆಗಳಿಂದ ಸುಮಾರು 160 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ಹರಿಪ್ರಸಾದ್ ಸ್ವಾಗತಿಸಿ, ಶಿಕ್ಷಕಿ ಜಯಂತಿ.ಎಂ. ಧನ್ಯವಾದವಿತ್ತರು.ಶಿಕ್ಷಕ ಸುಧೀರ್ ನಿರ್ವಹಿಸಿದರು.

LEAVE A REPLY

Please enter your comment!
Please enter your name here