ಬೆಳ್ತಂಗಡಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಕು.ಮಾನ್ಯರಿಗೆ ಸನ್ಮಾನ

0

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಕುಮಾರಿ ಮಾನ್ಯ ಇವರನ್ನು ಸನ್ಮಾನಿಸಲಾಯಿತು.

ಇವರು ಚಿಕ್ಕ ವಯಸ್ಸಿನಲ್ಲಿ ಹಲವಾರು ಸಾಧನೆಯನ್ನು ಬಹುಮುಖ ಪ್ರತಿಭೆ ಸಮಾಜಕ್ಕೆ ಸ್ಪೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಹೆಮ್ಮೆಯ ಆಮಂತ್ರಣ ಪರಿವಾರ ವಿಜಯಕುಮಾರ್ ಜೈನ್ ಇವರ ಸಾರಥ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರು ಪ್ರವೀಣ್ ಕೋಡಿಯಾಲ್ ಬೈಲ್, ಹಿರಿಯರಾದ ಬಿ ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥರು ವಿಜಯಕುಮಾರ್ ಜೈನ್, ಜಾನಪದ ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್, ಧರ್ಮಸ್ಥಳ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ, ಪ್ರಣವ್ ಸಭಾಂಗಣದ ಮಾಲಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here