ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ

0

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಆ.12ರಂದು 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಾಗೂ ನಶಾಮುಕ್ತ ಭಾರತ ಅಭಿಯಾನ ಪ್ರಾರಂಭವಾಗಿ 5ನೇ ವರ್ಷದ ಅವಧಿಗೆ ಬರುತ್ತಿರುವುದರಿಂದ ನಶಾಮುಕ್ತ ಭಾರತ ಅಭಿಯಾನ ಯೋಜನೆಯಡಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸಲಾಯಿತು.

ವಿದ್ಯಾಸಂಸ್ಥೆಯ ಸಂಯೋಜಕ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ವಿಂದ್ಯಾಶ್ರೀ ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here