ಬೆಳ್ತಂಗಡಿ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಾಮಾನ್ಯ ಸಭೆ

0

ಬೆಳ್ತಂಗಡಿ: ಮಂಗಳೂರು ಕುಲಶೇಖರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಇದರ ಬೆಳ್ತಂಗಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಾಮಾನ್ಯ ಸಭೆ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅಧ್ಯಕ್ಷತೆಯಲ್ಲಿ ಆ.12ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿನಾಕಿ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಸಂಘಗಳ ಅಭಿವೃದ್ಧಿ ನಿಟ್ಟಿನಲ್ಲಿ ರಚನಾತ್ಮಕ ಸಲಹೆ ಸೂಚನೆಗಳನ್ನು ತಿಳಿಸಿ, ಶೈಕ್ಷಣಿಕ ಸಾಲಿನಲ್ಲಿ ಸಾಧನೆಗೈದವರನ್ನು ಗುರುತಿಸಿ ಗೌರವಿಸಲಾಯಿತು. ತಾಲೂಕು ಮಟ್ಟದ ಉತ್ತಮ ಪುರುಷ ಮತ್ತು ಮಹಿಳಾ ಕೃತಕ ಗರ್ಭಧಾರಣಾ ಕಾರ್ಯಕರ್ತರ ಸಾಲಿನಲ್ಲಿ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸುಮಿತ್ರಾ ರವರಿಗೆ 2023-24ನೇ ಸಾಲಿನ ತಾಲೂಕಿನ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಜಯರಾಮ ರೈ, ಕೆಎಂಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಎಂ.ಡಿ ವಿವೇಕ್ ಡಿ., ಬೆಳ್ತಂಗಡಿಯ ನಿರ್ದೇಶಕ ಪದ್ಮನಾಭ ಶೆಟ್ಟಿ, ನಿರ್ದೇಶಕರಾದ ನಾರಾಯಣ ಪ್ರಕಾಶ್, ಸುಧಾಕರ್, ಸುಭದ್ರಾ ರಾವ್, ವೀಣಾ, ವ್ಯವಸ್ಥಾಪಕ ರವಿರಾಜ್ ಉಡುಪ, ಉಪ ವ್ಯವಸ್ಥಾಪಕ ಸತೀಶ್ ರಾವ್, ಬಂದಾರು ಹಾ.ಉ.ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ರಾಜೇಶ್ವರಿ ಕಬಿಲಾಲಿ ಹಾಗೂ ಕಾರ್ಯದರ್ಶಿ ಭವ್ಯಾ ಗಣೇಶ್ ಕೆ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here