ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಸಾಧನಾ ಪ್ರಶಸ್ತಿ

0

ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪರಿಗೆ ಸ್ಮರಣಿಕೆ, ಸನ್ಮಾನ ಪತ್ರ ನೀಡಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಸತತ ನಾಲ್ಕನೇ ಬಾರಿಗೆ ಸಾಧನಾ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ತಾಲೂಕಿನ ನಿರ್ದೇಶಕ ಕುಶಾಲಪ್ಪ ಗೌಡ ಹಾಗೂ ಇತರ ನಿರ್ದೇಶಕರು ಹಾಗೂ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here