ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ಮತ್ತು ಒಕ್ಕಲಿಗ ಗೌಡರ ಸಂಘ ಉಜಿರೆ ನೇತೃತ್ವದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆ

0

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇವರ ಸಹಯೋಗದೊಂದಿಗೆ ವರಮಹಾಲಕ್ಷ್ಮಿ ವೃತ ಪೂಜೆಯು ಆ.16ರಂದು ಎಸ್ ಪಿ ಆಯಿಲು ಮಿಲ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ವಹಿಸಿದ್ದರು. ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸವನ್ನು ಸುಲೋಚನಾ ಸಂಜೀವ ಗೌಡ ಪಾಂಚಜನ್ಯ ನೀಡಿ ವರಮಹಾಲಕ್ಷ್ಮಿ ವೃತದ ಮಹತ್ವವನ್ನು ತಿಳಿಸಿದರು. ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರು ಪ್ರಸ್ತಾವಿಕ ಮಾತನಾಡಿದರು. ದ.ಕ ಜಿಲ್ಲೆ ಒಕ್ಕಲಿಗ ಸೇವಾ ಸಂಘ ಸದಸ್ಯರು ವಿಜಯ್ ಗೌಡ ವೇಣೂರು ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಮಾತನಾಡಿ ವರಮಹಾಲಕ್ಷ್ಮಿ ವೃತ ಪೂಜೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲೆ ಒಕ್ಕಲಿಗರ ಸೇವಾ ಸಂಘ ಜೊತೆ ಕೋಶಾಧಿಕಾರಿ ಸೂರಜ್ ವಲಂಬ್ರ ಭಾಗವಹಿಸಿದ್ದರು. ವೇದಿಕೆಯಲ್ಲಿ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಂಜನ್ ಜಿ ಗೌಡ, ದಾಮೋದರ ಗೌಡ ಸುರುಳಿ ನಿರ್ದೇಶಕರು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಉಜಿರೆ, ಜೊತೆ ಕಾರ್ಯದರ್ಶಿ, ಒಕ್ಕಲಿಗ ಗೌಡರ ಸೇವಾ ಸಂಘ ದ.ಕ, ಸೌಮ್ಯಲತ ಜಯಂತ ಗೌಡ ಸದಸ್ಯರು ಒಕ್ಕಲಿಗರ ಸೇವಾ ಸಂಘ ದ.ಕ ಜಿಲ್ಲೆ ಉಪಸ್ಥಿತರಿದ್ದರು

ಯಶೋದಾ ರಾಘವೇಂದ್ರ ಗೌಡ ಸ್ವಾಗತಿಸಿ, ಅನುಪಮಾ ಸತೀಶ್ ಗೌಡ ಧನ್ಯವಾದವಿತ್ತರು, ಪ್ರಕಾಶ್ ಗೌಡ ಕೆದ್ಲ ನಿರೂಪಿಸಿದರು.

LEAVE A REPLY

Please enter your comment!
Please enter your name here