ಕರಾಯ: ನೀರಿಗೆ ಬಿದ್ದು ಬಾಲಕ ಮೃತ್ಯು

0

ಬೆಳ್ತಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಆ.17ರಂದು ಸಂಭವಿಸಿದೆ.

ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್ ತಂಝೀರ್ (16 ವರ್ಷ) ಮೃತ ಬಾಲಕ. ಈತ ಪುತ್ತಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಕಾರ್ಯಕ್ರಮವೊಂದಕ್ಕೆ ಕರಾಯ ಗ್ರಾಮದ ಹಲೇಜಿಗೆ ಹೋಗಿದ್ದು, ಮಧ್ಯಾಹ್ನ ಊಟ ಮಾಡಿ ಹಿಂದಿರುಗುವ ವೇಳೆ, ಸನಿಹದಲ್ಲೇ ಹರಿಯುವ ತೋಡಿನ ನೀರಿಗೆ ಬಿದ್ದು ನಾಪತ್ತೆಯಾಗಿದ್ದ. ಜೊತೆಗಿದ್ದ ಸಹಪಾಠಿಗಳು ಹುಡುಕಾಟ ನಡೆಸಿ ವಿಫಲರಾದಾಗ, ಇತರರಿಗೆ ಮಾಹಿತಿ ನೀಡಿದ್ದು, ಇತರರು ಬಾಲಕ ನೀರಿನಲ್ಲಿ ಮುಳುಗಿದ ಸ್ಥಳಕ್ಕೆ ಧುಮುಕಿ ನೀರಿನಾಳದಿಂದ ಆತನನ್ನು ಹೊರ ತೆಗೆದರಾದರೂ, ಆ ವೇಳೆ ಆತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿ ಮೃತ ಬಾಲಕನ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here