ಬಡಗಕಾರಂದೂರು: ಸ.ಉ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ- ಶಾಲೆಗೆ ಸೇವೆಗೈದ ಮಹನೀಯರಿಗೆ ಗೌರವಾರ್ಪಣೆ

0

ಬಡಗಕಾರಂದೂರು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು 78ನೇ ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು.ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಶಿಕಾಂತ್ ನಾಯಕ್ ರವರು ಧ್ವಜಾರೋಹಣ ನೆರವೇರಿಸಿದರು.ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ, ಬಲಿದಾನಗೈದ ಮಹಾತ್ಮರನ್ನು ಸ್ಮರಿಸುತ್ತಾ ಮೆರವಣಿಗೆ ನಡೆಸಲಾಯಿತು.

ಶಾಲಾ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯದ ಮಹತ್ವ ಸಾರುವ ಭಾಷಣ,ಛದ್ಮವೇಷ,ಗೀತಗಾಯನ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.ಶಾಲೆಯ ಅಭಿವೃದ್ಧಿಗೆ ಶ್ರಮಿಸಿ ಸೇವೆಗೈದ ಎಸ್ ಡಿ ಎಂ ಸಿ ಪೂರ್ವಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಹಾಗೂ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ್ ರಾವ್ ದೋರಿಂಜರವರನ್ನು ಸನ್ಮಾನಿಸಲಾಯಿತು ಹಾಗೂ ನಿಕಟಪೂರ್ವ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕಾಂತ್ ನಾಯಕ್ ವಹಿಸಿದ್ದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಹರೀಶ್ ಆಚಾರ್ಯ ಮಿತ್ತರೋಡಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಐಶ್ವರ್ಯ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎನ್, ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದದವರು ವಿಧ್ಯಾರ್ಥಿಗಳು, ಪೋಷಕ ವೃಂದದವರು, ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಶ್ವೇತಾ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here