ತಾಲೂಕು ಆಡಳಿತ ಸೌಧದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

0

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಆ.20ರಂದು ಬೆಳ್ತಂಗಡಿ ತಾಲೂಕು ಆಡಳಿತ ಸಭಾಂಗಣದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಭಾಷಣಕಾರರಾಗಿ ಬೆಳ್ತಂಗಡಿ ಶ್ರೀ ಗುರುದೇವ ವಿ.ಎಸ್.ಎಸ್. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವತ್ ಕುಮಾರ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಗುರುನಾರಾಯಣ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಮತ್ತು ಉಪ ತಹಶೀಲ್ದಾರ್ ಜಯ ಉಪಸ್ಥಿತರಿದ್ದರು.

ಪ್ರಮುಖರಾದ ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ರಾಜೇಶ್ ಮೂಡುಕೋಡಿ, ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಮುತ್ತಿತರರು ಉಪಸ್ಥಿತರಿದ್ದರು.

ಸಮಿತಿಯ ಉಪಾಧ್ಯಕ್ಷ ತಾ.ಪಂ.ಇಓ ಭವಾನಿಶಂಕರ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here