ಲಾಯಿಲ: ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ ಉದ್ಘಾಟನೆ

0

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ 353 ನೇ ಆರಾಧನಾ ಮಹೋತ್ಸವ ಆ.20ರಂದು ನಡೆಯಿತು.ದೀಪ ಪ್ರಜ್ವಲನೆಯನ್ನು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಲ.ಯತೀಶ್ ಸಿರಿಮಜಲ್ ಮಾಡಿದರು.

ಮುಖ್ಯ ಅತಿಥಿಗಳಾಗಿ ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಬೆಂಗಳೂರಿನ ಉದ್ಯಮಿ ನಾರಾಯಣ ಬೇಗೂರು ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ವಹಿಸಿದ್ದರು.

ಉಪಾಧ್ಯಕ್ಷ ಮಹಾಬಲ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಬೆಳ್ತಂಗಡಿ ಕೋರ್ನಾಯ ದಂಪತಿಗಳಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಟ್ರಸ್ಟ್ ನ ಕಾರ್ಯದರ್ಶಿ ವಸಂತ್ ಸುವರ್ಣ ರವರು ಸ್ವಾಗತಿಸಿ, ಟ್ರಸ್ಟಿ ಉಮಾ ರಾವ್ ರವರು ವಂದಿಸಿದರು.

LEAVE A REPLY

Please enter your comment!
Please enter your name here