ಬೆಳ್ತಂಗಡಿ: ಪ.ಪಂ.ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ

0

ಬೆಳ್ತಂಗಡಿ: ಪ.ಪಂ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯರಿಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಗೊಂಡಿತ್ತು.

ಇದೀಗ ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಆ.28ರಂದು ಚುನಾವಣಾಧಿಕಾರಿ ಪೃಥ್ವಿ ಸಾನಿಕಂ ಮುಂದಾಳತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷರಾಗಿ ಗೌರಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮುಖ್ಯಾಧಿಕಾರಿ ರಾಜೇಶ್ ಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here