ಕೊಕ್ಕಡ: ಉಪ್ಪಾರಪಳಿಕೆ 25ನೇ ವರ್ಷದ ಕೃಷ್ಣ ಜನ್ಮಾಷ್ಟಮಿ ಆಚರಣೆ- ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ, ಸಸಿಗಳ ನಾಟಿ ಕಾರ್ಯಕ್ರಮ

0

ಕೊಕ್ಕಡ: ಉಪ್ಪಾರಪಳಿಕೆ 25ನೇ ವರ್ಷದ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ ಸೆ.1ರಂದು ಶ್ರೀಕೃಷ್ಣ ಭಜನಾ ಮಂದಿರದ ಮೈದಾನದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷರಾದ ಶ್ರೀಧರ್ ದೇರಾಜೆ ಇವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಯನ್ನು ಕಲ್ಕುಡ ಕಲ್ಲುರ್ಟಿ ಗ್ರಾಮ ದೈವಸ್ಥಾನ ಕೆಂಪಕೋಡಿ ಇದರ ಅಧ್ಯಕ್ಷರಾದ ಪಿ ಕೆ ನಾರಾಯಣ ಗೌಡ ಆಳಂಬಿಲ ಮತ್ತು ಕುಶಾಲಪ್ಪ ಗೌಡ ಪೂವಾಜೆ ನೆರವೇರಿಸಿದರು.

ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ ಶ್ರೀಕೃಷ್ಣ ಮಂದಿರದ ಭೂಮಿ ಪೂಜೆಯನ್ನು ಶ್ರೀರಾಮ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಬಾಲಕೃಷ್ಣ ನೈಮಿಷ ಮತ್ತು ಸತ್ಯ ಸಾರಮಣಿ ದೈವಸ್ಥಾನ ಮಹಾವೀರ ಕಾಲೋನಿ ಇದರ ಅಧ್ಯಕ್ಷ ಗಿರೀಶ್ ರವರು ನೆರವೇರಿಸಿದರು.ಸಸಿಗಳ ನಾಟಿ ಕಾರ್ಯಕ್ರಮವನ್ನು ಉಪ್ಪಿನಂಗಡಿ ವಲಯ ಅರಣ್ಯಧಿಕಾರಿ ಜಯಪ್ರಕಾಶ್ ಕೆ.ಕೆ ನೆರವೇರಿಸಿದರು.

ಶ್ರೀಕೃಷ್ಣ ಭಜನಾ ಮಂದಿರ ಸೇವಾಟ್ರಸ್ಟ್ ನ ಅಧ್ಯಕ್ಷ ಶ್ರೀನಾಥ್ ಬಡಾಕೈಲು ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನೆರವೇರಿತು.ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಬಾಲಕೃಷ್ಣ ನೈಮಿಷ, ಜಯಪ್ರಕಾಶ್ ಕೆ ಕೆ, ಗಿರೀಶ್ ಮಹಾವೀರ ಕಾಲೋನಿ, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ ಬೇಬಿ ಶ್ರೀಧರ್ ಬಳಕ್ಕ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಕೋರಿದರು. ಶ್ರದ್ಧಾ ಗೆಳೆಯರ ಬಳಗದ ಸರ್ವ ಸದಸ್ಯರು ಮತ್ತು ಶ್ರೀ ಕೃಷ್ಣ ಮಂದಿರದ ಸೇವಾಟ್ರಸ್ಟ್ ನ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕರಿಗೆ ಕ್ರೀಡಾ ಸ್ಪರ್ಧೆ ಮತ್ತು ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಿತು.

ಕಾರ್ಯಕ್ರಮವನ್ನು ಶಿವಾನಂದ ಸಂಕೇಶ ನಿರೂಪಿಸಿ, ಶ್ರೀಕೃಷ್ಣ ಭಜನಾ ಮಂಡಳಿಯ ಗೌರವಧ್ಯಕ್ಷ ಯೋಗೀಶ್ ಆಳಂಬಿಲ ಪ್ರಾಸ್ಥವಿಕವಾಗಿ ಮಾತಾಡಿ ಮತ್ತು ಸ್ವಾಗತಿಸಿ, ಕೀರ್ತಿ ದೇರಾಜೆ ಧನ್ಯವಾದವನ್ನು ನೆರವೇರಿಸಿದರು.

LEAVE A REPLY

Please enter your comment!
Please enter your name here