ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ನಿಂದ ವರ್ಗಾವಣೆಗೊಂಡ ಉಪವಲಯಾರಣ್ಯಾಧಿಕಾರಿ ಪ್ರಶಾಂತ್ ರಿಗೆ ಸನ್ಮಾನ

0

ಕಳೆಂಜ: ಸುಮಾರು 8 ವರ್ಷಗಳ ಕಾಲ ಕಳೆಂಜ ಭಾಗದಲ್ಲಿ ದಕ್ಷ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಮಂಗಳೂರಿನ ಅರಣ್ಯ ಸಂಚಾರಿ ದಳಕ್ಕೆ ವರ್ಗಾವಣೆಗೊಂಡ ಪ್ರಶಾಂತ್ ರವರ ಉತ್ತಮ ಸೇವೆಯನ್ನು ಗುರುತಿಸುವ ಸಲುವಾಗಿ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಇವರನ್ನು ಬರಮಾಡಿಕೊಂಡು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಶಾಂತ್ ರವರು ಉತ್ತಮವಾಗಿ ಸೇವೆ ಸಲ್ಲಿಸಲು ಈ ಭಾಗದ ಪ್ರತಿಯೊಬ್ಬರೂ ಅವಕಾಶ ಮಾಡಿ ಕೊಟ್ಟಿದ್ದಾರೆ ಎಲ್ಲರಿಗೂ ನಾನು ಕೃತಜ್ಞನಾಗಿರುವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್ ಕೆ.ಡಿ, ಗೌರವಧ್ಯಕ್ಷ ಪಿ.ಟಿ ಸಬಾಸ್ಟಿನ್, ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿ ತೋಮಸ್ ಪಿ ಡಿ, ಕೋಶಧಿಕಾರಿ ಮ್ಯಾತ್ಯು ಕೆ ಕೆ, ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here