ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

0

ನಡ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಇವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಸರಕಾರೀ ಪದವಿ ಪೂರ್ವ ಕಾಲೇಜಿನಲ್ಲಿ ಸೆ.5ರಂದು ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಡಾlಪ್ರದೀಪ್ ಕುಮಾರ್ ಅವರು ಮಾತನಾಡುತ್ತಾ “ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸಮಚಿತ್ತದಿಂದ ಆಟವಾಡಬೇಕು.”ಎಂದು ಕಗ್ಗದ ಉಕ್ತಿಯೊಂದನ್ನು ವಿವರಿಸುತ್ತಾ ತಿಳಿಸಿದರು.

ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ಮೋಹನ್ ಗೌಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರ ಚಂದ್ರಶೇಖರ್ ಸ್ವಾಗತಿಸಿ ಲಿಲ್ಲಿ ಪಿ.ವಿ. ವಂದಿಸಿದರು.ಸಮಾರೋಪ ಸಮಾರಂಭದಲ್ಲಿ ಅಜಿತ್ ಆರಿಗ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪಾ ಡಿ. ಸ್ವಾಗತಿಸಿ, ವಸಂತಿ ಪಿ. ನಿರೂಪಿಸಿ, ವಂದಿಸಿದರು.

ಬಾಲಕರ ವಿಭಾಗದಲ್ಲಿ ಉಜಿರೆ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು, ಪ್ರಥಮ ಸ್ಥಾನವನ್ನು, ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆಯಿತು.ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು, ಉಜಿರೆ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆಯಿತು.

LEAVE A REPLY

Please enter your comment!
Please enter your name here