ಕೊಕ್ಕಡ: ಜೆಸಿಐ ಕಪಿಲಾ ವತಿಯಿಂದ ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನಗಣಮನ ಬರವಣಿಗೆ ಮತ್ತು ಪ್ರಬಂಧ ಸ್ಪರ್ಧೆ

0

ಕೊಕ್ಕಡ: ಜೆಸಿಐ ಕಪಿಲಾ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.13ರಂದು ಜನಗಣಮನ ಬರವಣಿಗೆ ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಕ್ಕಡ ಶಾಲಾ ಮುಖ್ಯೋಪಾಧ್ಯಾಯ ಪದ್ಮಾವತಿ ವೇದಿಕೆ ಹಂಚಿಕೊಂಡಿದ್ದರು. ಕೆ ಶ್ರೀಧರ್ ರಾವ್ ಪ್ರಾಸ್ತಾವಿಕ ಮಾತುಗಳನ್ನು ನುಡಿದರು.ವಿಜೇತ ಮಕ್ಕಳಿಗೆ ಜೆಸಿಐ ವತಿಯಿಂದ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಮಾರ್ಗದರ್ಶಕ ಜೋಸೆಫ್ ಪಿರೇರ, ನಿಕಟ ಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರ, ಸಂಪನ್ಮೂಲ ವ್ಯಕ್ತಿ ರಾಜರಾಮ, ಶಾಲಾ ಶಿಕ್ಷಕರಾದ ಸಿಮಿ ಕೆಪಿ, ಸುಚಿತ್ರಾ, ರವಿ, ಚೈತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಜೆಸಿವಾಣಿ ಮನೋರಮ್ಮ ವಾಚಿಸಿದರು, ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ಸ್ವಾಗತಿಸಿ, ಜೆಸಿಂತಾ ಡಿಸೋಜ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here