ಸೆ.20: ಅಡಿಕೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೈತರಿಗೆ 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಪ್ರಚಾರ ಸಾಹಿತ್ಯ ಕಾರ್ಯಕ್ರಮದಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಸೆ.20ರಂದು ಶುಕ್ರವಾರ ಅಂಡಿಂಜೆ ಗ್ರಾಮದ ಶ್ರೀ ವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಡಾ.ಭವಿಷ್ಯ ವಿಜ್ಞಾನಿಗಳು, CPCRI ವಿಟ್ಲ ರವರು ಆಗಮಿಸುತ್ತಿದ್ದು ತಾಲೂಕಿನ ರೈತರು ಕಾರ್ಯಕ್ರಮಕ್ಕೆ ಹಾಜರಾಗಿ ಆಧುನಿಕ ಕೃಷಿ ಪದ್ಧತಿ ಬಗ್ಗೆ ಮಾಹಿತಿ ಪಡೆಯಲು (ಜಿ.ಪಂ) ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.
ಬೆಳ್ತಂಗಡಿ ಹೋಬಳಿ: ಮಹಾವೀರ ಶೇಬಣ್ಣವರ ನೇ. , ಮೊಬೈಲ್ ನಂ: 8123921087
ವೇಣೂರು ಹೋಬಳಿ: ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598
ಕೊಕ್ಕಡ ಹೋಬಳಿ: ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು : ಕೆ.ಎಸ್. ಚಂದ್ರಶೇಖರ್, ಮೊಬೈಲ್ ನಂ: 9448336863

LEAVE A REPLY

Please enter your comment!
Please enter your name here