ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾಯಲ್ಲಿ ಶಿಕ್ಷಕರ ದಿನಾಚರಣೆ

0

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.13ರಂದು ಆಚರಿಸಲಾಯಿತು.

10ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರಿಗೆ ಗುರುವಂದನೆಯನ್ನು ಮಾಡಿದರು. ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಕವನಗಳ ಮೂಲಕ ಶಿಕ್ಷಕರ ಮಹತ್ವವನ್ನು ತಿಳಿಸಿದರು.ವಿದ್ಯಾರ್ಥಿಗಳು ಶಿಕ್ಷಕರಿಗೆ ವಿಭಿನ್ನ ರೀತಿಯ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕ ಗಿರೀಶ್ ಕೆ. ಎಚ್. ಅಧ್ಯಕ್ಷತೆ ವಹಿಸಿ ಮಾತನಾಡಿ ಇದು ನಿಮ್ಮ ಜೀವನಕ್ಕೆ ಅಡಿಪಾಯ ಇನ್ನು ಮುಂದಕ್ಕೂ ನಿಮ್ಮ ಜೀವನ ಉಜ್ವಲವಾಗಲಿ. ಎಂದು ಶುಭ ಹಾರೈಸಿದರು. ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳೇ ಉತ್ತಮ ಅಂಕಗಳನ್ನು ಪಡೆದು ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ ಎಂದರು.

\ಕಾಲೇಜಿನ ಪ್ರಾಂಶುಪಾಲ ಓಮನ , ಹಿರಿಯ ಪ್ರಾಥಮಿಕ ಮುಖ್ಯೋಪಾಧ್ಯಾಯಿನಿ ಅಕ್ಷತ, ಕಿರಿಯ ಪ್ರಾಥಮಿಕ ಪವಿತ್ರ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿ ವರ್ಷಿತ ಮತ್ತು ದ್ವಿತೀಯ ಪಿಯುಸಿಯ ಸಿಂಚನ ಮತ್ತು ಸಮೀಕ್ಷಾ ನಿರೂಪಿಸಿದರು. 10ನೇ ತರಗತಿಯ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಕಾರ್ಯಕ್ರಮವು ಆಯೋಜಿಸಿದರು.

LEAVE A REPLY

Please enter your comment!
Please enter your name here