ಉತ್ತಮ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಬೆಳ್ತಂಗಡಿ ಲಯನ್ಸ್ ಕ್ಲಬ್‌‌ ವತಿಯಿಂದ ಸನ್ಮಾನ

0

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆಯ ದಿನದಂದು ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿ ಬೆಳ್ತಂಗಡಿ ತಾಲೂಕಿಗೆ ಹಿರಿಮೆ ತಂದು ಕೊಟ್ಟ ಶಿಕ್ಷಕರನ್ನು ಲಯನ್ಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು.

ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ವಿಶ್ವನಾಥ್ ಗೌಡ ವಿಟ್ಲ, ಮಂಜುನಾಥ್ ಜಿ, ಮೋಹನ್ ಬಾಬು, ಕರಿಯಪ್ಪ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್, ಉಮೇಶ್ ಶೆಟ್ಟಿ, ಅಮಿತಾನಂದ ಹೆಗ್ಡೆ ಉಪಸ್ಥಿತರಿದ್ದರು.

ಪುಷ್ಪಾವತಿ ಎನ್ ನಾವರ, ಶುಭಾಷಿಣಿ, ಸುಂದರಿ ನಾಣ್ಯಪ್ಪ, ದೀಪ ಕಿರಣ್ ಸನ್ಮಾನಿತರ ಪರಿಚಯ ಮಾಡಿದರು. ವಸಂತ್ ಶೆಟ್ಟಿ ಶ್ರದ್ಧಾ ಸ್ವಾಗತಿಸಿದರು. ಧರಣೇಂದ್ರ ಕೆ. ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here