ನಡ: ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

0

ನಡ: ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರೌಢಶಾಲಾ ಮಟ್ಟದ ಬೆಳ್ತಂಗಡಿ ವಲಯಗಳಾದ ಬಂಗಾಡಿ, ಅಣಿಯೂರು, ಕಕ್ಕಿಂಜೆ, ಬೆಳ್ತಂಗಡಿ ಕ್ಲಸ್ಟರ್ ಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡೆಸಲಾಯಿತು.

ಅಧ್ಯಕ್ಷತೆಯನ್ನು ನಡ ಗ್ರಾ.ಪಂ. ಅಧ್ಯಕ್ಷೆ ಮಂಜುಳಾರವರು ವಹಿಸಿ, ಮುಖ್ಯ ಅತಿಥಿಗಳಾದ ಮುರಳಿ ಬಲಿಪ, ನ್ಯಾಯವಾದಿಗಳು ಬಲಿಪ ರೆಸಾರ್ಟ್ ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಶ್ವರಿ, ನಡ ಸ.ಪ.ಪೂ.ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್, ಶಾಲಾ ಮುಖ್ಯ ಶಿಕ್ಷಕ ಮೋಹನ ಬಾಬು ಡಿ, ನೋಡಲ್ ಅಧಿಕಾರಿಯಾದ ECO ಚೇತನಾಕ್ಷಿ, ಶಿಕ್ಷಣ ಸಂಯೋಜಕರು, ಕ್ಲಸ್ಟರ್ ಗಳ CRP ಗಳು, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ವಸಂತ ಗೌಡ, ಸಮಿತಿಯ ಎಲ್ಲ ಸದಸ್ಯರು, ಗಣ್ಯರು ಭಾಗವಹಿಸಿದ್ದರು.

ತಾಲೂಕಿನ ಸುಮಾರು 31 ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕ ಶಿವಪುತ್ರ, ಸುರೇಶ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here