ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ ಉದ್ಘಾಟನೆ

0

ಬೆಳ್ತಂಗಡಿ: ಪದವಿಪೂರ್ವ ಕಾಲೇಜು ಉಪನಿರ್ದೇಶಕರು, ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ.26ರಂದು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ-ಖೋ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುತ್ತಾ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಬೇಕಾದರೆ ಕ್ರೀಡೆ ಅತ್ಯಂತ ಅವಶ್ಯಕತೆ ಎಂದು ಹಿರಿಯ ವಿದ್ಯಾರ್ಥಿ, ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕುಮಾರ ಜೈನ್ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ರೊನಾಲ್ಡ್ ಲೋಬೊ, ತ್ರೀವಿಕ್ರಂ ಹೆಬ್ಬಾರ್, ಪದ್ಮ ಕುಮಾರ್ ಆಗಮಿಸಿದ್ದು, ಬೆಳ್ತಂಗಡಿ ತಾಲೂಕಿನ ಏಳು ಪದವಿ ಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಮೋಹನ ಭಟ್ ಸ್ವಾಗತಿಸಿ, ಭೌತಶಾಸ್ತ್ರ ವಿಭಾಗದ ವಿಶಾಲಾಕ್ಷಿ ಧನ್ಯವಾದ ಸಮರ್ಪಿಸಿದರು. ಡಾ.ರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here