ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವತಿಯಿಂದ ಬಡಗಕಾರಂದೂರು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವತಿಯಿಂದ ಬಡಗಕಾರಂದೂರು ಶಾಲೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ ಅಜಿಲರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ಉದ್ಘಾಟನಾ ಸಮಾರಂಭದಲ್ಲಿ ಪ್ರಮುಖರಾದ ಶ್ರೀನಿವಾಸ್ ರಾವ್ ದೋರಿಂಜ, ಸದಾನಂದ ಪೂಜಾರಿ ಉಂಗಿಲಬೈಲು, ದಿನೇಶ್ ಪಿಕೆ ಬಳಂಜ, ಧರ್ಣಪ್ಪ ಪೂಜಾರಿ ದೋರಿಂಜ, ಜಗದೀಶ್ ರೈ ಪಾಂಡ್ಯೊಟ್ಟು, ಸುಕೇಶ್ ಜೈನ್, ಡಾ.ಪ್ರತೀತ್ ಅಜಿಲ, ಸುರೇಶ್ ಎನ್, ಆನಂದ ಪೂಜಾರಿ ನೀರಲ್ಕೆ, ಸುಪ್ರೀತ್ ಜೈನ್, ದೀಪಕ್ ಗೌಡ ಹಾಗೂ ಊರವರು, ಊರಿನ ಸಂಘ ಸಂಸ್ಥೆಗಳ ಮುಖಂಡರು, ಸಂಸ್ಥೆಯ ಎನ್ ಎಸ್ ಎಸ್ ವಿಭಾಗದ ಪ್ರಧಾನರುಗಳು, ವೈದ್ಯಾಧಿಕಾರಿಗಳು ಸಂಸ್ಥೆಯ ವಿದ್ಯಾರ್ಥಿಗಳು ಭಾಗಿಯಾದರು.

LEAVE A REPLY

Please enter your comment!
Please enter your name here