ಉರುವಾಲು: ಸಿಡಿಲು ಬಡಿದು ಮನೆಗೆ ಹಾನಿ

0

ಉರುವಾಲು: ತಾರಿದಡಿ ನಿವಾಸಿ ಸೇಸಪ್ಪ ಎಂಬುವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾದ ಘಟನೆ ಸೆ.30ರಂದು ನಡೆದಿದೆ.

ತಾಲೂಕಿನ ವಿವಿಧೆಡೆ ಸೆ.30ರಂದು ಮಧ್ಯಾಹ್ನ ಮೋಡಿ ಕವಿದ ವಾತಾವರಣವಿದ್ದು ಕೆಲವೆಡೆ ಉತ್ತಮ ಮಳೆಯಾಗಿದೆ.

ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದ ಪರಿಣಾಮ ಗೋಡೆ ಬಿರುಕು ಬಿಟ್ಟಿದೆ. ಅಷ್ಟೇ ಅಲ್ಲದೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಸಂದರ್ಭ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಬರಲು ಹೋಗಿದ್ದರು. ಆದ್ದರಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ಸೇಸಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here