ಇಂದಬೆಟ್ಟು: ರಸ್ತೆ ಬದಿ ನಿಲ್ಲಿಸಿದ ಕಾರಿಗೆ ಸರ್ಕಾರಿ ಬಸ್ ಡಿಕ್ಕಿ

0

ಇಂದಬೆಟ್ಟು: ಹೋಟೆಲ್ ಒಂದರ ಸಮೀಪದಲ್ಲಿ ನಿಲ್ಲಿಸಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಅ.01 ಸಂಜೆ ನಡೆದಿದೆ. ಕಿಲ್ಲೂರು ಬೆಳ್ತಂಗಡಿ ಹೆದ್ದಾರಿಯಲ್ಲಿ ಬೆಳ್ತಂಗಡಿ ಕಡೆಗೆ ಸಂಚರಿಸುತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಇಂದಬೆಟ್ಟು ಪಂಚಾಯತ್ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಅಲ್ಲೋ ಕಾರಿಗೆ ಸಂಜೆ 5.30ರ ಸುಮಾರಿಗೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಈ ವೇಳೆ ಕಾರಿನಲ್ಲಿ ಹಾಗೂ ಅದರ ಸುತ್ತಮುತ್ತ ಸ್ಥಳದಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.ಆದರೆ ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದೆ.ಅಪಘಾತಕ್ಕೆ ಬಸ್‌ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here