ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದ ಎದುರು ಡೊಂಗ್ರೆ ಕಟ್ಟಡದಲ್ಲಿ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಇದೀಗ ಕಾತ್ಯಾಯಿನಿ ಕಟ್ಟಡಕ್ಕೆ ಅ.3ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು.
ಮಕ್ಕಳ ತಜ್ಞ ಗೋವಿಂದ ಕಿಶೋರ್ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾಲಕ ಶಿತಿಕಂಠ ಭಟ್, ಸಿಬ್ಬಂದಿಯವರು ಉಪಸ್ಥಿತರಿದ್ದರು.