ಮಂಗಳೂರಿನಲ್ಲಿ ಅಕ್ರಮ ಗಾಂಜ ಮಾರಾಟ: ಬೆಳ್ತಂಗಡಿ ಮೂಲದ ಅನ್ವರ್ ಬಂಧನ

0

ಬೆಳ್ತಂಗಡಿ: ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ, ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್‌ ನಿವಾಸಿ ಅಬುತಾಹಿರ್ ಯಾನೇ ಅನ್ವರ್ (25) ಬಂಧಿತ ಆರೋಪಿ.

ಗಾಂಜಾ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಆತನನ್ನು ವಶಕ್ಕೆ ಪಡೆದಿದ್ದಾರೆ.ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ, ಮೊಬೈಲ್ ಫೋನ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 1.75 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here