ಬೆಳ್ತಂಗಡಿ: ಸರಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ

0

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಬೆಳ್ತಂಗಡಿ ನಿವೃತ್ತ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಅ.5ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜಿ.ಎಂ.ಎಫ್.ಸಿ ವಿಜಯೇಂದ್ರ ಟಿ.ಹೆಚ್ ಉದ್ಘಾಟನೆಯನ್ನು ಮಾಡಿದರು.ಅಧ್ಯಕ್ಷತೆಯನ್ನು ಬೆಳ್ತಂಗಡಿ ನಿವೃತ್ತ ಸಂಘದ ಅಧ್ಯಕ್ಷ ವಿಠಲ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ಸರ್ಕಾರಿ ಸಹಾಯಕ ಅಭಿಯೋಜಕರಾದ ಆಶಿತಾ ಎಂ., ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಪಾರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್.ಎ ಇವರು ಹಿರಿಯ ನಾಗರಿಕರ ದಿನಾಚರಣೆ ಕುರಿತು ಕಾನೂನು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here