ಬೆಳ್ತಂಗಡಿ: ಬಂಟರ ಸಂಘದ ನೂತನ ಕಾರ್ಯಕಾರಿ‌ ಮಂಡಳಿಯ ಪ್ರಪ್ರಥಮ ಸಭೆ

0

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ನೂತನ ಕಾರ್ಯಕಾರಿ ಮಂಡಳಿಯ ಪ್ರಪ್ರಥಮ ಸಭೆ ನಡೆಯಿತು. ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ, ಮಹಿಳಾ ಸಂಘಟನೆಯನ್ನು ವಲಯ ಮಟ್ಟದಲ್ಲಿ ಬಲಿಷ್ಠಗೊಳಿಸುವ, ಬೆಳ್ತಂಗಡಿಯ ಪ್ರತಿ ಬಂಟ ಮಹಿಳೆ ಸಂಘಟನೆಯ ಸದಸ್ಯನನ್ನಾಗಿ ಮಾಡುವ ಜವಬ್ದಾರಿ ಕುರಿತಾಗಿ ಚರ್ಚಿಸಲಾಯಿತು. ಇದರ ಜೊತೆ ದೀಪಾವಳಿ ಹಬ್ಬ ಆಚರಣೆಯ ಕುರಿತಾಗಿ ಪೂರ್ವ ಭಾವಿ ಸಿದ್ಧತೆಗಳ ಕುರಿತು ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಇದರ ಅಧ್ಯಕ್ಷ ಜಯಂತ್ ಶೆಟ್ಟಿ, ಭಂಡಾರಿಗುಡ್ಡೆ, ಉಪಾಧ್ಯಕ್ಷರಾದ ನವೀನ್ ಸಾಮಾನಿ ಕರಂಬಾಡು ಬೀಡು, ಕಾರ್ಯದರ್ಶಿ ಸುರೇಶ್ ಕುಮಾರ್ ಲಾಯಿಲ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಸಂಚಾಲಕ ಪುಷ್ಫರಾಜ್ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ, ಕರಂಬಾಡು ಬೀಡು, ಸಂಚಾಲಕಿ ಶೋಭಾ ವಿ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

ಮಾತೃ ಸಂಘದ ಸಂಚಾಲಕ ಜಯರಾಮ್ ಭಂಡಾರಿ ಪ್ರಾಸ್ತಾವಿಕ ಮಾತನ್ನಾಡಿದರು. ಮಹಿಳಾ ವಿಭಾಗ ಕಾರ್ಯದರ್ಶಿ ಶ್ರೇಯಾ ಶೆಟ್ಟಿ ನಿರೂಪಣೆ, ರಕ್ಷಿತಾ ಶೆಟ್ಟಿ ಮುಂದಿನ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಈ ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಮಂಡಳಿ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here