ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

0

ಗುರಿಪಳ್ಳ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತನ್ನ ಸಾಂತ್ವನ ನಿಧಿಯಿಂದ ಒಟ್ಟುಗೂಡಿಸಿದ ಸಹಾಯಧನದ ಮೊತ್ತವನ್ನು ಇತ್ತೀಚೆಗೆ ಸುರಿದ ಭಾರಿ ಮಳೆಗೆ ತನ್ನ ಮನೆಯ ಒಂದು ಪಾರ್ಶ್ವ ಸಂಪೂರ್ಣ ಬಿರುಕುಗೊಂಡು ಮನೆ ಸಂಪೂರ್ಣ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಹೆಬ್ಬಾರ್ ದೊಡಿ ನಿವಾಸಿ ನೋಣಯ್ಯ ಪೂಜಾರಿ ಇವರ ಕುಟುಂಬಕ್ಕೆ ಹತ್ತು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸಲಾಯಿತು.

ನೋಣಯ್ಯ ಪೂಜಾರಿಯವರ ಪತ್ನಿ ಬೇಬಿ ಇವರಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಗುರುರಾಜ್ ಗುರಿಪಳ್ಳ, ಜಯ ಕುಮಾರ್ ನಡ, ಚಂದ್ರಶೇಖರ್ ಇಂದಬೆಟ್ಟು, ಗ್ರಾಮ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್, ಯುವವಾಹಿನಿ ಸಂಚಾಲನ ಸಮಿತಿ ಗುರಿಪಳ್ಳ ಅಧ್ಯಕ್ಷ ಜಯರಾಮ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ದೇವಕಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here