ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರ ಆಯ್ಕೆ

0

ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ 2025 ರಿಂದ 2030 ರವರೆಗಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಶಿಕ್ಷಕ ಧರಣೇಂದ್ರ ಕೆ. ಇವರ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ಜಯಶಾಲಿಗಳಾಗಿದ್ದಾರೆ.

ಈ ತಂಡದಲ್ಲಿ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಧರಣೇಂದ್ರ ಕೆ., ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕಳ್ತೂರು ಸಂತೆಕಟ್ಟೆಯ ಮನೋಹರ ಹೆಗ್ಡೆ, ಕೊಲ್ಲೂರು ಮೂಕಾಂಬಿಕ ಪ್ರೌಢಶಾಲೆ ಬೀಸಿನಪಾರೆಯ ರಾಜೀವ ಶೆಟ್ಟಿ, ಮಹಿಳಾ ವಿಭಾಗದಲ್ಲಿ ಕಸ್ತೂರಿ ಹೆಚ್ ಆರ್, ಸರಕಾರಿ ಪದವಿ ಪೂರ್ವ ಕಾಲೇಜು ಕಾವೂರು ಮಂಗಳೂರಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಮತ್ತು ಠೇವಣಿ ವಿಭಾಗದಲ್ಲಿ ನಿತ್ಯಾನಂದ ಶೆಟ್ಟಿ, ಸಹ ಶಿಕ್ಷಕ, ರಾಯ್ಸನ್ ಸರಕಾರಿ ಪ್ರೌಢಶಾಲೆ, ಕಂಡೂರು, ಕುಂದಾಪುರ ಉಡುಪಿ ಇವರು ಆಯ್ಕೆಯಾಗಿರುತ್ತಾರೆ. ಆಯ್ಕೆಯಾಗಿರುವ 5 ಜನರು ಕೂಡ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುತ್ತಾರೆ.

ಇವರೆಲ್ಲರೂ ಕೂಡ ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಗುರುತಿಸಿಕೊಂಡವರಾಗಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಕರ ವ್ಯವಹಾರಿಕ ವಿಚಾರಕ್ಕೂ ಕೂಡ ಸ್ಪಂದಿಸಲಿ ಎಂದು ಸರ್ವಶಿಕ್ಷಕರು ಕೂಡ ಆಶಯವನ್ನು ವ್ಯಕ್ತಪಡಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here