ಕುವೆಟ್ಟು, ಓಡಿಲ್ನಾಳ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ

0

ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1ರಿಂದ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಶ್ರೀ ಗುರು ನಾರಾಯಣ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಫೆ.15ರಂದು ಬೆಳಿಗ್ಗೆ ಗಂಟೆ 9.30 ಕ್ಕೆ ಆಯೋಜಿಸಲಾಗಿತ್ತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಗುರುನಾರಾಯಣ ಸೇವಾ ಸಂಘ ಕುವೆಟ್ಟು ಇದರ ಅಧ್ಯಕ್ಷ ನಾಗೇಶ್ ಅದೇಲು ಕ್ಷೇತ್ರದ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು

ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.

ಶ್ರೀ ಗುರು ನಾರಾಯಣ ಸೇವಾ ಸಂಘ ಕುವೆಟ್ಟು ಇದರ ಗೌರವ ಅಧ್ಯಕ್ಷ ಚಂದ್ರಶೇಖರ ಕೋಟ್ಯಾನ್, ಕುವೆಟ್ಟು ವಲಯ ಸಂಚಾಲಕಿ ಶಾಂತ ಜೆ. ಬಂಗೇರ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷ ಲಲಿತ ಕೇದಳಿಕೆ, ಕಾರ್ಯದರ್ಶಿ ಲಲಿತ ಚಿದಾನಂದ, ಕೋಶಾಧಿಕಾರಿ ವಿಮಲಾ ಜೆ. ಬಂಗೇರ, ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ಜಯಂತಿ ಜಾಲಿಯಾರು, ಕೃಷಿಪತ್ತಿನ ಸಹಕಾರಿ ಸಂಘ ಮಡಂತ್ಯಾರು ಇದರ ನಿರ್ದೇಶಕ ಧನಲಕ್ಷ್ಮಿ ಚಂದ್ರಶೇಖರ್, ಶೋಭಾ ಶಶಿಧರ್, ವಿಮಲಾ ವರಕಬೆ, ಸುಜಾತಾ ವರಕಬೆ, ರೋಹಿಣಿ, ದಿವ್ಯ, ಜನಿತ ಜಯಂತಿ ಹಾಗೂ ಕುವೆಟ್ಟು ಓಡಿಲ್ನಾಳ ಗ್ರಾಮದ ಹಲವಾರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಗೆಜ್ಜಗಿರಿ ಕುವೆಟ್ಟು ವಲಯದ ಸಂಚಾಲಕಿ ವಿನೋಧಿನಿ ರಾಮಪ್ಪ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಅತಿಥಿಗಳನ್ನು ಚಂದ್ರಶೇಖರ್ ಕೋಟ್ಯಾನ್ ಸ್ವಾಗತಿಸಿದರು. ಶಾಂತಾ ಜಿ. ಬಂಗೇರ ಕಾರ್ಯಕ್ರಮ ನಿರೂಪಿಸಿದರು. ವಿಮಲಾ ಜೆ. ಬಂಗೇರ ಧನ್ಯವಾದನ್ನಿತ್ತರು.

LEAVE A REPLY

Please enter your comment!
Please enter your name here