ಮುಂಡಾಜೆ: ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ-ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

0

ಮುಂಡಾಜೆ: ಜಾಲಿ ಓ.ಎ. ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ೧೯೯೧ರಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿ, ೨೦೦೪ರಿಂದ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ, ಸುಮಾರು ೩೪ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಫೆ.28ರಂದು ವಯೋ ನಿವೃತ್ತಿ ಹೊಂದಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಕಾರ್ಯದರ್ಶಿ ಕೃಷ್ಣ ಭಟ್ ರವರು ನಿವೃತ್ತರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಖಜಾಂಚಿಯವರಾದ ಅಚ್ಯುತ ನಾಯಕ್, ಶತಾಬ್ದಿ ವಿದ್ಯಾಲಯ ಸಮಿತಿ ಮುಂಡಾಜೆಯ ಸಂಚಾಲಕರಾದ ನಾರಾಯಣ ಫಡ್ಕೆ, ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಅಧ್ಯಕ್ಷರಾದ ವಿನಯಚಂದ್ರ, ಸದಸ್ಯರಾದ ವಿಶ್ವನಾಥ ಶೆಟ್ಟಿ, ಭಾರತಿ ಫಡ್ಕೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹ ಪ್ರಾಧ್ಯಾಪಕರಾದ ಡಾ. ರವಿ ಎಂ. ಎನ್.ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡ ಇತಿಹಾಸ ಉಪನ್ಯಾಸಕಿ ಗೀತಾ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

LEAVE A REPLY

Please enter your comment!
Please enter your name here