ಮಿತ್ತಬಾಗಿಲು: ಗ್ರಾಮೀಣ ಮಕ್ಕಳಿಗಾಗಿ ಮಿತ್ತಬಾಗಿಲು ಗ್ರಾಮ ಪಂಚಾಯತ್ ಅರಿವು ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಗ್ರಾಮ ಪಂಚಾಯತ ಕಛೇರಿ ಸಭಾಂಗಣದಲ್ಲಿ ಮೇ. 5ರಿಂದ 19ರವರೆಗೆ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಇವರ ಘನ ಅಧ್ಯಕ್ಷತೆಯಲ್ಲಿ ಮೇ. 23ರಂದು ನಡೆಯಿತು.
ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ., ಉಪಾಧ್ಯಕ್ಷ ವಿಜಯ, ಸದಸ್ಯರಾದ ರಾಮಣ್ಣ, ಚಂದ್ರ ಶೇಖರ ಗೌಡ, ಸುಜ್ಞಾನ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವತ್ಸಲಾ, ಗ್ರಂಥಾಲಯ ಮೇಲ್ವಿಚಾರಕಿ ಸುಜಾತ ಜಿ. ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ಹಂಶಿಕಾ ಮತ್ತು ವರ್ಷಿಣಿ ಪ್ರಾರ್ಥಿಸಿದರು. ಸುಜಾತ ಜಿ. ಸ್ವಾಗತಿಸಿ, ಶಿಬಿರದ ಅನಿಸಿಕೆಯನ್ನು ಹೇಳಿದರು. ಶಿಬಿರಾರ್ಥಿಗಳಿಗೆ ಭಾಗವಹಿಸುವಿಕೆಯ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಸುಜ್ಞಾನ ಸಂಜೀವಿನಿ ಮಹಿಳಾ ಒಕ್ಕೂಟದ ಎಂ.ಬಿ.ಕೆ, ಎಲ್.ಸಿ.ಆರ್.ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಚಾರ್ವಿ ಮೋಹನ್ ಇವರು ಕಾರ್ಯಕ್ರಮ ನಿರೂಪಿಸಿದರು. ತುಳಸಿ ದಿನೇಶ ಇವರು ಧನ್ಯವಾದವಿತ್ತರು.