ಕರ್ನೋಡಿ ಉ. ಸ. ಪ್ರಾ. ಶಾಲಾ ಪ್ರಾರಂಭೋತ್ಸವ:ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ, ಲೇಖನ ಸಾಮಾಗ್ರಿ ವಿತರಣೆ

0

ಲಾಯಿಲ: ಉನ್ನತಿಕರಿಸಿದ ಸರಕಾರಿ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ಜೂ.2ರಂದು ಶಾಲಾ ಪ್ರಾರಂಭೋತ್ಸವ ಹಾಗೂ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ ಬುಕ್, ಹಾಗೂ ಲೇಖನ ಸಾಮಗ್ರಿಗಳ ವಿತರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಇವರು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ. ಕೆ., ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಯೋಧೋದರ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್., ಕೋಶಾಧಿಕಾರಿ ಸದಾಶಿವ ಕಕ್ಕೇನ, ಉಪಾಧ್ಯಕ್ಷ ಮುಷ್ತಾಕ್ ಕಾಶಿಬೆಟ್ಟು, ಎಸ್. ಡಿ. ಎಂ. ಸಿ ಅಧ್ಯಕ್ಷೆ ಸೌಮ್ಯಾ, ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ್ ಎಂ. ಭಾಗವಹಿಸಿದರು.

ಮಕ್ಕಳಿಗೆ ಬೇಕಾದ 35,000 ಮೌಲ್ಯದ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಶಾಲಾ ಸಭಾ ಮಂಟಪಕ್ಕೆ ಮೇಲ್ಚಾವಣಿ ನಿರ್ಮಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮೂಹ ಅಭಿವೃದ್ಧಿ ವಿಭಾಗದ ವತಿಯಿಂದ ಒಂದು ಲಕ್ಷ ರೂ ಮಂಜೂರು ಮಾಡಲಾಯಿತು. ತಾಲೂಕು ಯೋಜನಾಧಿಕಾರಿ ಯಶೋಧರ ಕೆ. ಆದೇಶ ಪತ್ರವನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಶಾಲಾ ಹಳೆ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕರಾದ ಜಗನ್ನಾಥ ಎಂ.ಸ್ವಾಗತಿಸಿದರು. ಸಹ ಶಿಕ್ಷಕ ಕೃಷ್ಣ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿಯರಾದ ಗಂಗಾರಾಣಿ ನಾ ಜೋಷಿ, ತ್ರಿಶಾಲ, ಲೀನಾ ಡಿಸೋಜಾ ಸಹಕರಿಸಿದರು. ಸಹ ಶಿಕ್ಷಕಿ ಉಷಾ ಇವರು ವಂದಿಸಿದರು.

LEAVE A REPLY

Please enter your comment!
Please enter your name here