ಕರಂಬಾರು: ದ. ಕ. ಜಿ. ಪ. ಹಿರಿಯ ಪ್ರಾಥಮಿಕ ಶಾಲೆಯ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ಜೂ.2ರಂದು ಆಚರಿಸಲಾಯಿತು. ಶಿರ್ಲಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಎಂ. ಶೆಟ್ಟಿಯವರು ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ನೀಡಿ ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಅಶ್ವಥ್ ಸಾಲಿಯನ್, ಅಜೀಮ್, ಶೋಭಾ ಹರೀಶ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಯಶಸ್ವಿಗೆ ಶಾಲಾ ಶಿಕ್ಷಕಿರಾದ ಸಾವಿತ್ರಿ, ಲತಾ, ಸ್ವಾತಿ, ಅಂಗನವಾಡಿ ಶಿಕ್ಷಕಿ ಲಾವಣ್ಯ, ಸಹಾಯಕಿ ಮುತ್ತಮ್ಮ, ಬಿಸಿ ಊಟ ನೌಕರರಾದ ಜಯಂತಿ, ಚಂದ್ರಾವತಿ, ಮತ್ತು ಮಕ್ಕಳ ಪೋಷಕರು ಪಾಲ್ಗೊಂಡಿದ್ದರು. ಎಲ್ಲರಿಗೂ ಮದ್ಯಾಹ್ನ ಪಾಯಸದ ಊಟ ನೀಡಲಾಯಿತು. ಕಾರ್ಯಕ್ರಮವನ್ನು ಪೆರೋಡಿತ್ತಾಯಕಟ್ಟೆ ಸಿ.ಆರ್.ಪಿ ಕಿರಣ್ ಕುಮಾರ್ ಕೆ.ಎಸ್. ನಿರೂಪಿಸಿದರು. ಶಿಕ್ಷಕಿ ತಸ್ಮೀಯ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಛಾವಾಣ್ ಧನ್ಯವಾದ ಸಲ್ಲಿಸಿದರು.