ಬೆಳ್ತಂಗಡಿ: ಜೂ.2ರಂದು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿಯಲ್ಲಿ ‘ಶಾಲಾ ಪ್ರಾರಂಭೋತ್ಸವವನ್ನು’ ಶಾಲಾ ಸಭಾಂಗಣದಲ್ಲಿ ನೆರವೇರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ದೀಪ ಬೆಳಗಿಸಿ ‘ಶಿಕ್ಷಣದ ಮಹತ್ವದ ಜೊತೆಗೆ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು’ ಹಿತವಚನ ನೀಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಇವರು ಸ್ವಾಗತಿಸಿ, ಶಾಲಾ ನಿಯಮಗಳನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣುಪ್ರಕಾಶ್ ‘ಕಲಿಕೆಯಲ್ಲಿ ಮಕ್ಕಳ ಕರ್ತವ್ಯಗಳನ್ನು ಅಳವಡಿಸಿಕೊಳ್ಳುವುದರ ಬಗ್ಗೆ’ ಮನದಟ್ಟು ಮಾಡಿದರು. ವಾಣಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಮತ್ತು ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ. ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕಿ ಪ್ರೀತಿ ನಿರೂಪಿಸಿದರು.