ಧರ್ಮಸ್ಥಳ: ಜೂ.5ರಂದು ವಿಶ್ವ ಪರಿಸರ ದಿನದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಧರ್ಮಸ್ಥಳ ಘಟಕದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ವಿಭಾಗೀಯ ಸಂಚಾಲನಾಧಿಕಾರಿ ಜೈ ಶಾಂತಕುಮಾರ್ ಗಿಡ ನೀಡುವುದರ ಮುಖಾಂತರ ಈ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು, ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ನೌಕರರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಘಟಕದ ಆಡಳಿತ ಸಿಬ್ಬಂದಿಗಳು, ತಾಂತ್ರಿಕ ಹಾಗೂ ಚಾಲನ ಸಿಬ್ಬಂದಿಗಳು ಭಾಗವಹಿಸಿದ್ದರು.