ಸ.ಪ್ರ.ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

0

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಜೂ. 5ರಂದು ಕಾಲೇಜು ವಠಾರದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಅಡಿಕೆ, ಬಾದಾಮಿ, ಹಣ್ಣು ಹಂಪಲು ಗಿಡಗಳನ್ನು ನೆಡಲಾಯಿತು. ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪರಿಸರ ಸಂರಕ್ಷಣೆ ಇಡೀ ಜಗತ್ತಿನ ಮುಂದೆ ಇರುವ ಒಂದು ದೊಡ್ಡ ಸವಾಲು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ರಾ. ಸೇವಾ ಯೋಜನಾಧಿಕಾರಿ ರೊನಾಲ್ಡ್ ಪ್ರವೀಣ್ ಕೊರೆಯ ಸಂಘಟಿಸಿದರು. ಕಾಲೇಜಿನ ಸ್ನಾತಕೋತರ ಹಾಗೂ ಪದವಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು ರಾಧಾಕೃಷ್ಣ ಹೆಚ್‌.ಬಿ., ಜಗದೀಶ್ ಎಸ್., ಸುಧಾರಾಣಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here