ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ಎನ್.ಎಸ್.ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ

0

ಉಜಿರೆ: ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಎಸ್. ಡಿ. ಎಂ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪಕ  ಡಾ. ಲಕ್ಷ್ಮೀನಾರಾಯಣ ಭಾಗವಹಿಸಿ ಎನ್. ಎಸ್. ಎಸ್. ನ ಧ್ಯೇಯ, ಉದ್ದೇಶ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ತಿಳಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ.  ಎನ್.ಎಸ್.ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒಂದು ಅವಕಾಶವಾಗಿದ್ದು, ಸ್ವಯಂ ಸೇವಕರಾಗಿ ಇಲ್ಲಿ ತಮ್ಮನ್ನು ಸರಿಯಾಗಿ ತೊಡಗಿಸಿಕೊಂಡಾಗ ನಿಜವಾದ ವ್ಯಕ್ತಿತ್ವ ಮೂಡಿಸಿಕೊಳ್ಳಲು ಸಾಧ್ಯ ” ಎಂದು ಹೇಳಿದರು.

ವೇದಿಕೆಯಲ್ಲಿ ಎನ್. ಎಸ್. ಎಸ್ ನಿಕಟಪೂರ್ವ ಯೋಜನಾಧಿಕಾರಿ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿ ವಿಶ್ವನಾಥ್  ಎಸ್., ಸಹಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು. ಸ್ವಯಂ ಸೇವಕಿ  ಮೌಲ್ಯ ಅತಿಥಿಗಳ ಪರಿಚಯಿಸಿದರು. ಸ್ವಯಂ ಸೇವಕರಾದ ಸಂದೀಪ್ ಸ್ವಾಗತಿಸಿದರು. ಸಂತೋಷ್ ನಿರೂಪಿಸಿದರು. ಸ್ವಯಂಸೇವಕಿ ಪಲ್ಲವಿ ವಂದಿಸಿದರು.

LEAVE A REPLY

Please enter your comment!
Please enter your name here