ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ವೇಳೆ ಬೆಳ್ತಂಗಡಿ ಠಾಣಾ ನಿರೀಕ್ಷಕ ಬಿ.ಜಿ. ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ ಎಲೆಗಳನ್ನು, 6 ಮೊಬೈಲ್ ಫೋನ್, 2 ಬೈಕ್, 1 ಅಟೋ ರಿಕ್ಷಾ, 26,778ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಜಿ.ಸುಬ್ಬಾಪುರ್ ಮಠ, ಸಬ್ಇನ್ಸ್ಪೆಕ್ಟರ್ಗಳಾದ ಮುರುಳೀಧರ್ ನಾಯ್ಕ್, ಯಲ್ಲಪ್ಪ ಹಾಗೂ ಸಿಬ್ಬಂದಿ ಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.