ಚೆಕ್ ಅಮಾನ್ಯ ಪ್ರಕರಣದಲ್ಲಿ ಶಿಕ್ಷೆ: ತಲೆ ಮರೆಸಿಕೊಂಡಿದ್ದ ರಾಜೇಶ್ ಆರ್. ಶೆಣೈ ಬಂಧನ

0

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಿಂದ‌ ಶಿಕ್ಷೆ ಜರಿಯಾಗಿ ತಲೆಮರೆಸಿಕೊಂಡಿದ್ದ ರಾಜೇಶ್ ಆರ್. ಶೆಣೈ ಎಂಬವರನ್ನು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕ ವಿಜಯ್ ಪ್ರಸಾದ್ ರವರ ನಿರ್ದೇಶನದಂತೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತು ಧರ್ಮಸ್ಥಳ ಉಪ ನೀರಿಕ್ಷಕ ಸಮರ್ಥ್ ಅವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ವ್ರಷಭ ಮತ್ತು ಚರಣ್ ರಾಜ್ ಅವರು ಧರ್ಮಸ್ಥಳದಲ್ಲಿ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು 1,79,150/-ರೂ ದಂಡ ವಿಧಿಸಿದ್ದಾರೆ. ಅಲ್ಲದೆ 3 ತಿಂಗಳು ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

LEAVE A REPLY

Please enter your comment!
Please enter your name here