ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅವ್ಯವಹಾರ-ಆಸ್ತಿ ಜಫ್ತಿ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

0

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿ ಸಹಕಾರ ಸಂಘಗಳ ಉಪನಿಬಂಧಕರ ನ್ಯಾಯಾಲಯ ನೀಡಿರುವ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಯ ಆಸ್ತಿ ಜಫ್ತಿ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

ಸೊಸೈಟಿಯ ಹಂಗಾಮಿ ಅಧ್ಯಕ್ಷ ವಿ.ಆರ್. ನಾಯಕ್ ಮತ್ತು ಇತರರು ಆದೇಶದ ಕುರಿತಾಗಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತಾಗಿ ವಾದ ಆಲಿಸಿದ ಹೈಕೋರ್ಟ್ ಜಡ್ಜ್ ಸಚಿನ್ ಶಂಕರ್ ಮಗ್ದುಮ್ ಅವರು ಜಫ್ತಿ ಆದೇಶಕ್ಕೆ ತಡೆ ನೀಡಿ, ಜುಲೈ 4ನೇ ತಾರೀಕಿಗೆ ವಿಚಾರಣೆ ಮುಂದೂಡಿದ್ದಾರೆ.

LEAVE A REPLY

Please enter your comment!
Please enter your name here