ಉಜಿರೆ: ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಮತ್ತು ಎಸ್.ಡಿ.ಎಂ ಕ್ರೀಡಾ ಸಂಘದಿಂದ ಭೋದಕ ಮತ್ತು ಭೋದಕೇತರರಿಗೆ ಯೋಗ ಶಿಬಿರ ಉದ್ಘಾಟನಾ ಕಾರ್ಯಕ್ರಮವು ಜೂ.17ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.
ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ ಧರ್ಮಸ್ಥಳದ ಮೆಡಿಕಲ್ ವಿಭಾಗ ಮುಖ್ಯಸ್ಥ ಡಾ.ಶಿವಪ್ರಸಾದ್ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಯೋಗ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ., ಹಾಗೂ ಉಪ ಪ್ರಾಂಶುಪಾಲೆ ನಂದಕುಮಾರಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್., ಶಾರೀರಿಕ ಶಿಕ್ಷಣ ನಿರ್ದೇಶಕಿ ಶಾರದ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಸುದೀನ ನೆರವೇರಿಸಿದರು.