ಮುಂಡೂರು ಸ. ಕಿ. ಪ್ರಾ. ಶಾಲಾ ಮಕ್ಕಳಿಗೆ ಮಂಗಳಗಿರಿ ಕ್ಷೇತ್ರದಿಂದ ಪುಸ್ತಕ ವಿತರಣೆ

0

ಮುಂಡೂರು: ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮುಖ್ಯಸ್ಥ ರಾಜೀವ ಅವರಿಂದ ಮುಂಡೂರು ಸ. ಕಿ. ಪ್ರಾ. ಶಾಲೆಯ ಮಕ್ಕಳಿಗೆ ಉಚಿತವಾಗಿ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ಸತೀಶ್ ವಹಿಸಿದ್ದರು. ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್, ಮುಂಡೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಯಾದವ ಕುಲಾಲ್, ನಾಗಾಂಬಿಕ ಭಜನಾ ಮಂಡಳಿಯ ಕಾರ್ಯದರ್ಶಿ ಜಯರಾಜ್ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಕಲ್ಲೇಶ್ ಕೆ.ಬಿ. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದ್ದರು. ಶಿಕ್ಷಕಿಯರಾದ ವಿಶಾಲ, ಸಂಧ್ಯಾ ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here