ಬೆಳ್ತಂಗಡಿ: ಯೋಗವು ವಿಶ್ವಕ್ಕೆ ಭಾರತೀಯರ ಅಮೂಲ್ಯ ಕೊಡುಗೆ, ವಿದ್ಯಾರ್ಥಿಗಳು ಯೋಗಭ್ಯಾಸ ಮಾಡುವುದರಿಂದ ದೈನಂದಿನ ಕಾರ್ಯಗಳು ಸುಲಲಿತವಾಗಿ ಸಾಗುತ್ತದೆ. ಯೋಗವನ್ನು ಕೇವಲ ಚಟುವಟಿಕೆ ಆಗಿ ಸ್ವೀಕರಿಸದೆ ದೈನಂದಿನ ಜೀವನ ಶೈಲಿಯಾಗಿ ಸ್ವೀಕರಿಸಿ ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಅಭಿಪ್ರಾಯ ಪಟ್ಟರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅವಸರದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಶ್ವದಾದ್ಯಂತ 180 ಅಧಿಕ ರಾಷ್ಟ್ರಗಳು ಯೋಗಸಕರಾಗಿದ್ದು, ಯೋಗವು ಇಂದು ವಿಶ್ವಮಾನ್ಯವಾಗಿದೆ. ಪ್ರತಿಯೊಬ್ಬ ಮಗುವು ಕೂಡ ನಿತ್ಯ ಜೀವನದಲ್ಲಿ ಯೋಗಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಹಳೆಯ ವಿದ್ಯಾರ್ಥಿನಿ ದಿಶಾ ಪ್ರಶಾಂತ್, ಮಾತನಾಡಿ ಯೋಗಭ್ಯಾಸಕ್ಕೆ ವಯಸ್ಸಿನ ಮಿತಿ ಇಲ್ಲ, ದೇಹ ಮತ್ತು ಮನಸ್ಸಿನ ಶುಚಿತ್ವಕ್ಕೆ ಯೋಗ ಬಲು ಸಹಕಾರಿ, ಪ್ರತಿಯೊಬ್ಬರು ತಮ್ಮ ದಿನನಿತ್ಯದ ಚಟುವಟಿಕೆ ಸುಗಮವಾಗಿ ಸಾಗಲು ಅಭ್ಯಸಿಸುವುದು ಉತ್ತಮ ಎಂದು ತಿಳಿಸಿದರು.
ಸಂಸ್ಥೆಯ ಯೋಗ ತರಬೇತುದಾರರಾದ ದಿವ್ಯ ಎಂ. ಉಪಸ್ಥಿತರಿದ್ದು, ಆಂತರಿಕ ಮತ್ತು ಬಾಹ್ಯ ಯೋಗಗಳ ಮಾಹಿತಿ ಹಂಚಿಕೊಂಡರು. ಸಂಸ್ಥೆಯ ವಿದ್ಯಾರ್ಥಿಗಳು ಯೋಗ ಪ್ರದರ್ಶನ ಮತ್ತು ಯೋಗ ನೃತ್ಯ ಪ್ರದರ್ಶಿಸಿ ಯೋಗ ದಿನಾಚರಣೆಯ ಸಂಭ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಸಿ. ಬಿ. ಎನ್. ಪ್ರಾಂಶುಪಾಲ ಪ್ರಸಾದ್, ಉಪ ಮುಖ್ಯೋಪಾಧ್ಯಾಯ ಜಯತೀಲ, ಉಪನ್ಯಾಸಕ ಪ್ರಶಾಂತ್ ಆರ್. ಉಪಸ್ಥಿತರಿದ್ದರು. ವಿದ್ಯಾರ್ಥಿ ಶಾಶ್ವತ್ ಕಾರ್ಯಕ್ರಮ ಮುಖದಾಯಗಾ ನಿರೂಪಿಸಿ, ವಂದಿಸಿದರು.