ಕೊಕ್ಕಡ: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಬಂಡಾರಿ ಕೊಕ್ಕಡಕ್ಕೆ ಭೇಟಿ ನೀಡಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿಯ ಆಶೀರ್ವಾದ ಪಡೆದರು. ದೇವಳ ವ್ಯವಸ್ಥಾಪನ ಸಮಿತಿಯಿಂದ ಗೌರವಿಸಲಾಯಿತು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ದೇವಳ ಸಮಿತಿಯ ಸದಸ್ಯ ವಿಶ್ವನಾಥ ಕೊಲ್ಲಜೆ ಉಪಸ್ಥಿತರಿದ್ದರು.
ಕೊಕ್ಕಡ ಯುವ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ. ಎಮ್. ನಾಗೇಶ್ ಕುಮಾರ್ ಗೌಡ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್. ಕೆ. ಹಕೀಮ್ ಕೊಕ್ಕಡ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಪವನ್ ಕೊಲ್ಲಜೆ, ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ. ಎಚ್. ಮೊಹಮ್ಮದ್ ಕಲಂದರ್, ಕೊಕ್ಕಡ ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ವಾಜಿದ್, ಡಿಜಿಟಲ್ ಯೂಥ್ ಸದಸ್ಯ ಆಸಿಫ್ ಐಡಿಯಲ್ ಉಪಸ್ಥಿತರಿದ್ದರು. ಕೊಕ್ಕಡ ಎಂಡೋಪಾಲನ ಕೇಂದ್ರಕ್ಕೆ ಭೇಟಿ ನೀಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಎಂಡೋಪಾಲನ ಕೇಂದ್ರಕ್ಕೆ ಬೋರ್ ವೆಲ್ ಅನ್ನು ರಾಜ್ಯ ಅಧ್ಯಕ್ಷ ಕೊಡುಗೆಯಾಗಿ ನೀಡುವುದಾಗಿ ಘೋಷಿಸಿದರು.