ಬೆಳ್ತಂಗಡಿ: ಜೂ.25ರಂದು ಸುರಿದ ಮಳೆಗೆ ಶಿಶಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಕಿನ್ಯಡ್ಕ ಎಂಬಲ್ಲಿ ಜಗದೀಶ ಎಂಬವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿರುತದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್ ಹಾಗೂ ಪಂಚಾಯತ್ ಅಬಿವೃದ್ದಿ ಅಧಿಕಾರಿ ದಿನೇಶ್ ಭೇಟಿ ನೀಡಿ ಪರಿಶೀಲಿಸಿದರು. ಶೌರ್ಯ ವಿಪತ್ತು ನಿರ್ವಹಣಾ ಘಟಕದವರು ಮರ ತೆರವುಗೊಳಿಸಲು ಸಹಕರಿಸಿದರು.