ಶಿಕ್ಷೆ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಕೃಷ್ಣಪ್ಪ ಮತ್ತು ಶಿವಕುಮಾರ್ ಬಂಧನ

0

ಬೆಳ್ತಂಗಡಿ: ನ್ಯಾಯಾಲಯದಿಂದ ಶಿಕ್ಷೆ ಜಾರಿಯಾಗಿದ್ದರೂ ತಲೆ ಮರೆಸಿಕೊಂಡಿದ್ದ ಚೆಕ್ ಅಮಾನ್ಯ ಪ್ರಕರಣದ ಆರೋಪಿ ಕೃಷ್ಣಪ್ಪ ಮತ್ತು ಜಾತಿ ನಿಂದನೆ ಪ್ರಕರಣ ಆರೋಪಿ ಶಿವಕುಮಾ‌ರ್ ಶೆಟ್ಟಿ ಎಂಬವರನ್ನು ಬೆಳ್ತಂಗಡಿ ಠಾಣಾ ಪೊಲೀಸರು ಜೂ.22ರಂದು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೃಷ್ಣಪ್ಪ ಎಂಬಾತನಿಗೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಿವಕುಮಾ‌ರ್ ಎಂಬವರಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಕೇಸ್ ದಾಖಲಾದ ಸಮಯದಲ್ಲಿ ಜಾಮೀನು ಪಡೆದು ಹೊರ ಬಂದಿದ್ದ ಈ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದ ವೇಳೆ ಇವರು ತಲೆಮರೆಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇವರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಶಿವಕುಮಾರ್‌ನನ್ನು ಜೂ.22ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ಬಂಧಿಸಲಾಗಿದ್ದು ಕೃಷ್ಣಪ್ಪನನ್ನು ಕಡಿರುದ್ಯಾವರ ಗ್ರಾಮದಲ್ಲಿ ಬಂಧಿಸಲಾಗಿದೆ.

ಬಂಧಿತರನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕ ವಿಜಯ್ ಪ್ರಸಾದ್‌ರವರ ನಿರ್ದೇಶನದಂತೆ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಬಿ.ಜಿ. ಸುಬ್ಬಾಪುರ ಮಠ ಮತ್ತು ಉಪನೀರಿಕ್ಷಕ ಯಲ್ಲಪ್ಪರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ಮಾಲತೇಶ್, ಮುನಿಯ ನಾಯ್ಕ ಮತ್ತು ವಿನಯ ಪ್ರಸನ್ನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here