ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಮಾದಕ ದ್ರವ್ಯ ವಿರೋಧಿ ಜಾಥಾದಲ್ಲಿ ಭಾಗಿ

0

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಸಮೀವುಲ್ಲಾ ಮಾತನಾಡಿ, ‘ ಬದುಕು ಉತ್ತಮವಾಗಿರಲು ದುಶ್ಚಟ ಮುಕ್ತರಾಗಿರಬೇಕು. ವಿದ್ಯಾರ್ಥಿ ಬದುಕಲ್ಲಿ ಕೇವಲ ವಿದ್ಯಾರ್ಜನೆಯೆಡೆಗೆ ಮಾತ್ರ ಗಮನವಿರಿಸಿ. ಯಾವುದೇ ಕಾರಣಕ್ಕೂ ಮಾದಕ ದ್ರವ್ಯದ ಸೆಳೆತಕ್ಕೆ ಬಲಿಯಾಗಬಾರದು ‘ ಎಂದರು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್. ಎಸ್. ಎಸ್. ವಿದ್ಯಾರ್ಥಿಗಳು ಬೆಳ್ತಂಗಡಿ ತಾಲ್ಲೂಕು ವ್ಯಾಪ್ತಿಯ ಪೊಲೀಸ್ ಠಾಣೆಗಳ ವತಿಯಿಂದ ನಡೆದ ಮಾದಕ ವಸ್ತು ವಿರೋಧಿ ಜಾಥಾ ದಲ್ಲಿ ಭಾಗವಹಿಸಿದರು. ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಚಂದನಾ, ಸುಷ್ಮಾ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ರವಿರಾಮ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here